Uncategorized

ಪಾಕ್‌ನ 9 ಉಗ್ರರ ನೆಲೆಗಳು ಉಡೀಸ್..!

ಭಾರತ-ಪಾಕಿಸ್ತಾನ ಯುದ್ಧ ಆರಂಭ.! - 'ಆಪರೇಶನ್ ಸಿಂಧೂ‌ರ್' ಹೆಸರಿನಲ್ಲಿ ಪಾಕ್‌ನ 9 ನೆಲೆಗಳ ಮೇಲೆ ವಾಯುದಾಳಿ

ನವದೆಹಲಿ: ಜಮ್ಮು & ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ‘ಆಪರೇಷನ್‌ ಸಿಂಧೂ‌ರ್’ ಹೆಸರಿನಲ್ಲಿ ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಲಾಗಿದೆ.

ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ಇಂದು ರಾತ್ರಿ ಕಾರ್ಯಾಚರಣೆ ಆರಂಭಿಸಿದೆ. ಆ ಮೂಲಕ ಉಗ್ರ ಪೋಷಕ ಪಾಕಿಸ್ತಾನಕ್ಕೆ ಸರಿಯಾಗಿ ಬುದ್ದಿ ಕಲಿಸಲು ಭಾರತ ದಿಟ್ಟ ಹೆಜ್ಜೆಯನ್ನಿಟ್ಟಿದೆ.

2019ರಲ್ಲಿ ಪುಲ್ವಾಮಾ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದರು. ಏಪ್ರಿಲ್ 22 ರಂದು 26 ನಾಗರಿಕರನ್ನು ಬಲಿತೆಗೆದುಕೊಂಡ ಪಹಲ್ಲಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದವು.

“ನಮ್ಮ ಕ್ರಮಗಳು ಕೇಂದ್ರೀಕೃತವಾಗಿವೆ, ನಿಖರವಾಗಿವೆ

ಕೋಟ್ಲಿ, ಮುರಿಯ್ಕೆ, ಬಹಾವಲ್ಪು‌ರ್ ಮತ್ತು ಮುಜಫರಾಬಾದ್‌ನಲ್ಲಿರುವ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನದ ಡಿಜಿ ಐಎಸ್‌ಪಿಆ‌ರ್, ಲೆಫ್ಟಿನೆಂಟ್‌ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದರು. ಮುರಿಡೈ ಹಫೀಜ್ ಸಯೀದ್ ನಡೆಸುತ್ತಿರುವ ಭಯೋತ್ಪಾದಕ ಗುಂಪಿನ ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿಯಾಗಿದೆ. ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಬಹಲ್ವಾಪುರವು ಮಸೂದ್‌ ಅಜರ್‌ ನಡೆಸುತ್ತಿರುವ ಜೈಶ್-ಎ-ಮೊಹಮ್ಮದ್‌ನ ನೆಲೆಯಾಗಿದೆ.

ಭಾರತೀಯ ಸೈನಿಕರು ಮಾಡಿದ ಪಾಕಿಸ್ತಾನ ಮೇಲೆ ನಡೆಸಿದ ಆಫರೇಷನ್ ಸಿಂಧೂರ ಯಶಸ್ವಿಗೇ ಕಾರಣರಾದ ಸೈನಿಕರಗೇ ಅಭಿನಂದನೆಗಳು.

ಇಂದು ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕೆ ಗೋಷ್ಠಿಯಲ್ಲಿ ಹಿಂದುಸ್ತಾನ್ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ಶ್ರೀ ವಿನಾಯಕ್ ಮಾಲದಕರ್ ಇವರು ಭಾರತ್ ಸರ್ಕಾರ್ ಹಾಗೂ ಭಾರತೀಯ ಸೈನಿಕರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದರು

Related Articles

Leave a Reply

Your email address will not be published. Required fields are marked *

Check Also
Close
Back to top button
error: Content is protected !!