ಉನ್ನತ ಸುದ್ದಿ
Trending

ಹುಬ್ಬಳ್ಳಿ: ಹುಧಾ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಅವರ ವರ್ಗಾವಣೆಯನ್ನು ತಡೆಯುವಂತೆ ಮತ್ತು ಸದ್ಯದ ಸ್ಥಾನದಿಂದ ಅವರನ್ನು ಮುಂದುವರೆಸುವಂತೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದಿಂದ ಹುಬ್ಬಳ್ಳಿಯ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ರುದ್ರೇಶ ಘಾಳಿಯವರು ಹುಧಾ ಮಹಾನಗರ ಪಾಲಿಕೆಯ ಸಮಸ್ಯೆಗಳನ್ನು ಮತ್ತು ಮಹಾನಗರದ ಎಲ್ಲಾ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸುತ್ತಾ ಬರುತ್ತಿರುವ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲಾ ಎಂದು ಪ್ರತಿಭಟನಾಕಾರರು ಖಂಡಿಸಿದರು.

ಸರ್ಕಾರವು ಇತರ ವರ್ಗಾವಣೆಯನ್ನು ರದ್ದು ಮಾಡಿ ಪಾಲಿಕೆಯಲ್ಲಿಯೇ ಸೇವೆಯನ್ನು ಮುಂದುವರೆಸುವಂತೆ ಗುತ್ತಿಗೆದಾರರ ಸಂಘವು ತಮ್ಮಲ್ಲಿ ಮನವಿ ಮಾಡುತ್ತದೆ. ಮನವಿಗೆ ಸ್ಪಂದಿಸದೇ ಹೋದಲ್ಲಿ ಸರ್ಕಾರದ ವಿರುದ್ಧ ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಅವರ ಕಛೇರಿಯವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಸಂಘದ ಅಧ್ಯಕ್ಷರಾದ ಮೋಹನ ಗೌಡರ, ಕಾರ್ಯದರ್ಶಿ ಪಂಪಣ್ಣ ಅಂಬಿಗೇರ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

ಸುಧೀರ್ ಕುಲಕರ್ಣಿ ಬಿ ವಿ ನ್ಯೂ ಜ ಹುಬ್ಬಳ್ಳಿ

Related Articles

Leave a Reply

Your email address will not be published. Required fields are marked *

Back to top button
error: Content is protected !!